ಹತ್ತೂರೊಡೆಯನ ಜಾತ್ರಾ ಮಹೋತ್ಸವಕ್ಕಿಂದು ಗೊನೆ ಮುಹೂರ್ತ!!!

ಹತ್ತೂರ ಒಡೆಯ, ಪುತ್ತೂರ ಮುತ್ತು ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಏಪ್ರಿಲ್ 10 ರಿಂದ 20ರವರೆಗೆ ನಡೆಯಲಿರುವ ಅದ್ಧೂರಿ ಜಾತ್ರಾ ಮಹೋತ್ಸವಕ್ಕೆ ಇಂದು ಗೊನೆ ಮುಹೂರ್ತ ನೆರವೇರಿತು.
ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ವೇದಮೂರ್ತಿ ವಿ.ಎಸ್ ಭಟ್ ಅವರು ಗೊನೆ ಮುಹೂರ್ತ ನೆರವೇರಿಸಿದರು. ದೇವಾಲಯದ ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೇದಿಲಾಯ ಈ ಸಂದರ್ಭದಲ್ಲಿ ಸಹಕರಿಸಿದರು.
ಗೊನೆ ಮುಹೂರ್ತದ ಈ ಶುಭ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದೇ‌ವಳದ ಸಮಿತಿ ಪದಾಧಿಕಾರಿಗಳು, ಕರ ಸೇವಕರು, ಭಕ್ತಾದಿಗಳು ಉಪಸ್ಥಿತರಿದ್ದರು.

Post a Comment

0 Comments