ಪಹಲ್ಗಾಮ್ ದಾಳಿಗೆ ಪ್ರತಿಕಾರ ತೀರಿಸಿದ ಭಾರತೀಯ ಸೇನೆ: ಉರಿ ಸೆಕ್ಟರ್ ನಲ್ಲಿ ಇಬ್ಬರು ಪಾಕ್ ಉಗ್ರರ ಹತ್ಯೆ..!!

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ದಾಳಿ ನಡೆಸಿ 26 ಭಾರತೀಯರನ್ನು ಹತ್ಯೆಗೈದ ಬೆನ್ನಲ್ಲೇ ಭಾರತೀಯ ಸೇನೆ ಇಂದು ಪ್ರತಿಕಾರ ತೀರಿಸಿಕೊಂಡಿದ್ದು, ಇಬ್ಬರು ಪಾಕಿಸ್ತಾನದ ಭಯೋತ್ಪಾದಕರನ್ನು ಗುಂಡಿಕ್ಕಿ ಕೊಂದಿದೆ.
ಬರ ಮುಲ್ಲಾ ಸೆಕ್ಟರ್ ನಲ್ಲಿ ಭಾರತೀಯ ಸೇನೆಯು ನಡೆಸಿದ ಮುಂದಿನ ದಾಳಿಯಲ್ಲಿ ಇಬ್ಬರು ಪಾಕಿಸ್ತಾನ ಉಗ್ರರು ಧರೆಗುರುಳಿದ್ದು, ಅಪಾರ ಪ್ರಮಾಣದ ಮದ್ದು ಗುಂಡು, ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಮ್ಮು ಕಾಶ್ಮೀರದ ಬಾರ ಮುಲ್ಲಾ ಜಿಲ್ಲೆಯ ನಿಯಂತ್ರಣ ರೇಖೆಯಲ್ಲಿ ಪ್ರಯತ್ನ ಪಡುವುದನ್ನು ಭಾರತೀಯ ಭದ್ರತಾ ಪಡೆಗಳು ತಡಿದು ದಾಳಿ ನಡೆಸಿದ ನಂತರ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿರುವ ಬಗ್ಗೆ ಭಾರತೀಯ ಸೇನೆಯು ಸ್ಪಷ್ಟಪಡಿಸಿದೆ.

"ಏಪ್ರಿಲ್ 23, 2025 ರಂದು, ಉತ್ತರ ಕಾಶ್ಮೀರದ ಬಾರಾಮುಲ್ಲಾ ನಾಲಾದ ಸಾಮಾನ್ಯ ಪ್ರದೇಶವಾದ ಸರ್ಜೀವನ್ ಮೂಲಕ ಸುಮಾರು 2-3 ಯುಐ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದರು" ಎಂದು ಚಿನಾರ್ ಕಾರ್ಪ್ಸ್ ಬೆಳಿಗ್ಗೆ 8 ಗಂಟೆಯ ಸುಮಾರಿಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿತು.

Post a Comment

0 Comments