ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಿಂದ ವಿನಾಯಿತಿ..!!

ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿರುವ ಮತ್ತು ಈ ಹಿಂದೆ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಕನ್ನಡ ಕಡ್ಡಾಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 'ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ' ವಿನಾಯಿತಿ ನೀಡಿರುವುದಾಗಿ ಪ್ರಕಟಿಸಿದೆ. 
ಎಸ್ಎಸ್ಎಲ್ಸಿ ಅಥವಾ ರಾಜ್ಯ ಸರಕಾರವು ಅದಕ್ಕೆ ತತ್ಸಮಾನವೆಂದು ಘೋಷಿಸಿದ ಯಾವುದೇ ಪರೀಕ್ಷೆಯಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರುವ, ಈ ಹಿಂದೆ ಆಯೋಗ ಅಥವಾ ಯಾವುದೇ ಆಯ್ಕೆ ಪ್ರಾಧಿಕಾರವು ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದೆ. ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು ಉಳಿಕೆ ಮೂಲವೃಂದದ 70 ಮತ್ತು ಹೈ-ಕ ವೃಂದದ ಆರು ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಅಭ್ಯರ್ಥಿಗಳು ಕೂಡ kpsconline.karnataka.gov.in ಮೂಲಕ ವೈಯಕ್ತಿಕ ವಿವರಗಳನ್ನು ಸಲ್ಲಿಸುವಂತೆ ಕೆಪಿಎಸ್ಸಿ ತಿಳಿಸಿದೆ.


Post a Comment

0 Comments